Sunday, March 30, 2008

ಒಂದಷ್ಟು ಸಂತೋಷದ ವಿಷಯಗಳು




ತುಂಬ ದಿನಗಳಿಂದ ಎನನ್ನೂ ಬರೆದಿಲ್ಲ ಅದು ನನ್ನ ಸೊಮಾರಿತನ.
. ಸಂತೋಷದ ವಿಷಯವೆಂದರೆ ಗೆಳಯ ಎಮ್ ಡಿ ಅತಿ ರಭಸವಾಗಿ ಮುನ್ನುಗ್ಗುತ್ತಿದ್ದಾನೆ. ಮೊನ್ನೆ ಮೊನ್ನೆ ಅವನ ಬಾಂಬೇ ಟೇಲರ್ - ಲೇಡೀಸ್ ಬ್ಲೌಸ್ (!) ಸ್ಪೇಶಾಲಿಸ್ಟ ದಟ್ಸ್ ಕನ್ನಡ ಅಂರ್ತಜಾಲ ಪತ್ರಿಕೆಯಲ್ಲಿ ಪ್ರಕಟವಾಗಿತ್ತು
ತುಂಬ ಸುಂದರವಾದ ಕಥೆ ಅದು ಒಮ್ಮೆ ಓದಿ ನೋಡಿ ಒಂದು ಒಳ್ಳೆಯ ಓದಿಗೆ ಖಂಡಿತ ಮೋಸವಿಲ್ಲ. ಮತ್ತೊಂದು ಕಡೆ ಗೆಳೆಯ ಸಂತೋಷರ ಅಮೃತ ಸಿಂಚನ ನಿಜಕ್ಕೂ ಅದ್ಭುತವಾಗಿ ಸಾಗಿದೆ. ಅವರ ಹೋಳಿಯ ಮೆಲುಕು... ಬರಹದಲ್ಲಿ ಉತ್ತರ ಕರ್ನಾಟಕದ ಸಮಸ್ತ ಚಿತ್ರವನ್ನು ಕಟ್ಟಿ ಕೊಟ್ಟಿದ್ದಾರೆ ಉತ್ತರಕರ್ನಾಟಕ ಅಂದಿದ್ದಕ್ಕೆ ಕ್ಷಮೆ ಇರಲಿ ಉತ್ತರ ಕರ್ನಾಟಕ, ಉತ್ತರಕನ್ನಡ, ದಕ್ಷಿಣಕನ್ನಡ ಇವೆಲ್ಲಾ ನಾವು ಮಾಡಿಕೊಂಡಿರುವ ಮುಚ್ಚಲಾರದಂತಹ ಕಂದರಗಳು ಎಂದಾದರು ಮುಚ್ಚುತಾವೆಯೆ?? ಮತ್ತೊಂದೆಡೆ ಚುನಾವಣೆಯ ಭರಾಟೆ ಜೋರಾಗಿ ಶುರುವಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. ನಮ್ಮನ್ನು ಮತ್ತು ನಮ್ಮೆಲ್ಲರನ್ನೂ ಸಾಕುತ್ತಿರುವ ಈ ಬೆಂಗಳೂರಿನ ರಸ್ತೆ ಬದಿಯ ಗೋಡೆಗಳನ್ನು ಆ ಕೆಂಪೆಗೌಡರೆ ಕಾಪಾಡಬೇಕು. ಇನ್ನೂ ಪತ್ರಿಕೆಗಳ ವಿಷಯಬಿಡಿ ಅದರ ಬಗ್ಗೆ ಹೇಳುವದಾದರೆ ಮತ್ತೊಂದು ಬ್ಲಾಗನ್ನೆ ಹುಟ್ಟುಹಾಕಬೇಕು. ಚುನಾವಣೆ ಇಲ್ಲದ ದಿನಗಳಲ್ಲೆ ಸಹಿಸಿಕೊಳ್ಳುವುದು ಕಷ್ಟಸಾಧ್ಯ ಇನ್ನೂ ಚುನಾವಣೆ ಪ್ರಕಟವಾದರೆ ಮುಗಿಯಿತು. ಇದಕ್ಕೆ ಪೂರಕವೆಂಬಂತೆ ರವಿ ಬೆಳಗೆರೆಯವರು ಕಳೆದ ಸಾರಿಯ ತಮ್ಮ ಸಂಪಾದಕಿಯದಲ್ಲಿ ಸರಿಯಾಗಿಯೆ ಬರೆದಿದ್ದಾರೆ. ಪತ್ರಿಕೆಯ ಜಾಹೀರಾತು ಮತ್ತು ಗೋಡೆ ಬದಿಯ ವಿನೈಲ್ ಭೂತಗಳಿಂದ ನಮಗೆ ಮುಕ್ತಿ ಎಂದೊ . ಕಡೆಯದಾಗಿ ಇನ್ನೊಂದು ಮಾತು ಯೋಗರಾಜ ಭಟ್ರು ಮತ್ತೊಂದು ಹಾಡನ್ನ ಅರಮನೆ ಚಿತ್ರಕ್ಕಾಗಿ ಬರೆದಿದ್ದಾರೆ "ನನ್ನ ಎದೆಯಲಿ ಇಟ್ಟ ನಾಕು ಹೆಜ್ಜೆಯ ಗುರುತು ಅಳಿಸಿ ಬಿಡು" ಸುಂದರವಾದ ಸಾಹಿತ್ಯವಿರುವಂತಹ ಹಾಡು. ಅದರ ಬಗ್ಗೆ ಮತ್ತೊಮ್ಮೆ ಸವಿಸ್ತಾರವಗಿ ಬರೆಯುತ್ತೆನೆ ಎಮ್ ಡಿ ಯದೆ ಇನ್ನೊಂದು ರಾಪ್ಚಿಕ್ ಪದ್ಯ ಕಣ್ಣು-ನೋಟ ಓದುವುದನ್ನ ಮರೆಯಬೇಡಿ ಧನ್ಯವಾದಗಳೊಂದಿಗೆ ನಿಮ್ಮ